alex Certify BREAKING : ಮುಡಾ ಹಗರಣ ಕೇಸ್ : ವಿಚಾರಣೆಗೆ ಹಾಜರಾಗುವಂತೆ A-3, A-4 ಆರೋಪಿಗೆ ಲೋಕಾಯುಕ್ತ ನೋಟಿಸ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮುಡಾ ಹಗರಣ ಕೇಸ್ : ವಿಚಾರಣೆಗೆ ಹಾಜರಾಗುವಂತೆ A-3, A-4 ಆರೋಪಿಗೆ ಲೋಕಾಯುಕ್ತ ನೋಟಿಸ್..!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಎ3 ಆರೋಪಿ ಹಾಗೂ ಎ4 ಆರೋಪಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.

ಎ 3 ಮಲ್ಲಿಕಾರ್ಜುನ, ಎ4 ದೇವರಾಜುಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.

‘ ಮುಡಾ’ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.ಎಫ್ ಐ ಆರ್ ನಲ್ಲಿ ಸಿಎಂ ಸಿದ್ದರಾಮಯ್ಯ ಎ-1, ಪತ್ನಿ ಪಾರ್ವತಿ ಎ-2 ಎಂದು ಹೆಸರಿಸಲಾಗಿದೆ. ಹಾಗೆಯೇ ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ. ಈ ಸಂಬಂಧ ಕಳೆದ ಕೆಲವು ವಾರಗಳ ಹಿಂದೆ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿತ್ತು.. ಖಾಸಗಿ ದೂರಿನಲ್ಲಿ ಉಲ್ಲೇಖಿಸಿದಂತೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...