alex Certify BREAKING NEWS: ಮುನಿರತ್ನಗೆ ಮತ್ತೊಂದು ಸಂಕಷ್ಟ: ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯಲು ಸಿದ್ಧತೆ; ಪಕ್ಷದಿಂದಲೂ ಉಚ್ಛಾಟನೆ ಮಾಡುತ್ತೇವೆ ಎಂದ ಆರ್. ಅಶೋಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮುನಿರತ್ನಗೆ ಮತ್ತೊಂದು ಸಂಕಷ್ಟ: ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯಲು ಸಿದ್ಧತೆ; ಪಕ್ಷದಿಂದಲೂ ಉಚ್ಛಾಟನೆ ಮಾಡುತ್ತೇವೆ ಎಂದ ಆರ್. ಅಶೋಕ್

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಸ್ಫೋಟಕ ಮಾಹಿತಿ ಬಹಿರಂಗಪಡಿಸುತ್ತಿದ್ದಂತೆ ಎಚ್ಚೆತ್ತ ಬಿಜೆಪಿ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಈಗಾಗಲೇ ಅವರಿಗೆ ಬಿಜೆಪಿಯಿಂದ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಎಫ್ಎಸ್ಎಲ್ ವರದಿ ಬರಲಿ. ವರದಿ ಬಂದ ಬಳಿಕ ಮುನಿರತ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯುತ್ತೇವೆ. ಪಕ್ಷದಿಂದಲೂ ಉಚ್ಛಾಟನೆ ಮಾಡುತ್ತೇವೆ ಎಂದು ಆರ್.ಅಶೋಕ್ ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...