alex Certify ಜಾಹೀರಾತು ನೀಡುವುದರಿಂದ ನಿಮ್ಮ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲ : ರಾಜ್ಯ ಸರ್ಕಾರಕ್ಕೆ ಬಿಜೆಪಿ ಟಾಂಗ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಹೀರಾತು ನೀಡುವುದರಿಂದ ನಿಮ್ಮ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲ : ರಾಜ್ಯ ಸರ್ಕಾರಕ್ಕೆ ಬಿಜೆಪಿ ಟಾಂಗ್..!

ಬೆಂಗಳೂರು : ಜಾಹೀರಾತು ನೀಡುವುದರಿಂದ ನಿಮ್ಮ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲಎಂದು ಕಾಂಗ್ರೆಸ್ ಗೆ ಬಿಜೆಪಿ ಟಾಂಗ್ ನೀಡಿದೆ.

ದಸರಾ ಹಬ್ಬದ ಹಿನ್ನೆಲೆ ಪತ್ರಿಕೆಯಲ್ಲಿ ಜಾಹೀರಾತು ನೀಡಿದ ಸರ್ಕಾರಕ್ಕೆ ಬಿಜೆಪಿ ಟಾಂಗ್ ನೀಡಿದೆ.
ನವರಾತ್ರಿ ಎಂಬುದಕ್ಕೆ ಹಿಂದೂ ಧರ್ಮದಲ್ಲಿ ಪೌರಾಣಿಕ ಮಹತ್ವವಿದೆ. ದುರ್ಗೆಯ ನವ ಅವತಾರಗಳನ್ನು ಆರಾಧಿಸುವ ಈ ಹಬ್ಬವನ್ನು ಭ್ರಷ್ಟ ಮುಖ್ಯಮಂತ್ರಿ, ಮುಡಾ ಹಗರಣದ ಎ1 ಆರೋಪಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡಿರುವುದು ಅಕ್ಷಮ್ಯ. ಆರೋಪಿ ಸಿದ್ದರಾಮಯ್ಯ ಅವರೇ, ಈ ರೀತಿ ಜಾಹೀರಾತು ನೀಡುವುದರಿಂದ ನೀವು ಮಾಡಿರುವ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲ. ರಾಮ ಸತ್ಯನೇ, ಆದರೆ ಸಿದ್ದರಾಮಯ್ಯ ಬ್ರಹ್ಮಾಂಡ ಸುಳ್ಳು. ಶ್ರೀರಾಮ ಸತ್ಯ ಅನ್ವೇಷಣೆಗಾಗಿ ಸೀತೆಯಿಂದ ದೂರವಾಗಿ ಸತ್ಯಶೋಧನೆ ನಡೆಸಿದ್ದ. ಅದೇ ಮಾರ್ಗದಲ್ಲಿ ನೀವು ನಡೆಯುವುದಾದರೆ ಸಿಎಂ ಪದವಿಗೆ ರಾಜೀನಾಮೆ ಸಲ್ಲಿಸಿ ಸತ್ಯಶೋಧನೆಗೆ ಅವಕಾಶ ನೀಡಿ ಎಂದು ಬಿಜೆಪಿ ಟೀಕಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...