alex Certify ಬಡಿಗೆಗಳ ಜಾತ್ರೆಯಲ್ಲಿ 70 ಜನರಿಗೆ ಗಾಯ, ಇಬ್ಬರು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಡಿಗೆಗಳ ಜಾತ್ರೆಯಲ್ಲಿ 70 ಜನರಿಗೆ ಗಾಯ, ಇಬ್ಬರು ಗಂಭೀರ

ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಗಡಿ ಗ್ರಾಮ ಸೀಮಾಂಧ್ರ ಪ್ರದೇಶದ ದೇವರಗುಡ್ಡ ಮಾಳಮಲ್ಲೇಶ್ವರ ಜಾತ್ರೆಯಲ್ಲಿ ಶನಿವಾರ ಮಧ್ಯರಾತ್ರಿಯಿಂದ ಭಾನುವಾರ ಬೆಳಗಿನಜಾವದವರೆಗೆ ನಡೆದ ಬಡಿದಾಟದ ಜಾತ್ರೆಯಲ್ಲಿ 70 ಜನ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗುವಾಗ ಉರಿಯುವ ಬೆಂಕಿಯ ಪಂಜುಗಳನ್ನು ತೂರಿದ ವೇಳೆ ನೂಕು ನಗ್ಗಲು ಉಂಟಾಗಿ 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಜಾತ್ರೆಯಲ್ಲಿ ಭಕ್ತರಿಗೆ ಯಾವುದೇ ಗಾಯ, ಗಲಾಟೆ ಆಗಬಾರದು ಎನ್ನುವ ಉದ್ದೇಶದಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಉತ್ಸವ ಮೂರ್ತಿ ವಶಕ್ಕೆ ಪಡೆಯಲು 11 ಗ್ರಾಮಗಳ 20,000ಕ್ಕೂ ಹೆಚ್ಚು ಜನ ಬಡಿಗೆ ಹಿಡಿದು ಹೊಡೆದಾಡುವ ಸಂದರ್ಭದಲ್ಲಿ ಬೆಂಕಿಯ ಪಂಜು ತೂರಿದ್ದರಿಂದ ಹೆಚ್ಚಿನ ಜನ ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಅದೋನಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...