ಮೂರ್ಖರು ಯಾರಿದ್ದೀರಿ ಎಂದು ಕೇಳಿದರೆ ನಾವಿದ್ದೇವೆ ಅಂತಾರಂತೆ ಬಿಜೆಪಿ ನಾಯಕರು; ಕಾಂಗ್ರೆಸ್‌ ವ್ಯಂಗ್ಯ

ರಾಜ್ಯ ಬಿಜೆಪಿ ನಾಯಕರ ವಿರುದ್ದ ವ್ಯಂಗ್ಯವಾಡಿರುವ ಕಾಂಗ್ರೆಸ್‌, ಮೂರ್ಖರು ಯಾರಿದ್ದೀರಿ ಎಂದು ಕೇಳಿದರೆ ನಾವಿದ್ದೇವೆ ಎನ್ನುತ್ತಾರೆ ಬಿಜೆಪಿ ಕರ್ನಾಟಕ ನಾಯಕರು ! ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿದೆ.

ಸಿದ್ದಾರ್ಥ ವಿಹಾರ ಟ್ರಸ್ಟ್ ನಿವೇಶನವನ್ನು ಮರಳಿಸಿಲ್ಲ, ನಿವೇಶನ ಇನ್ನೂ ಮಂಜೂರಾಗದಿರುವಾಗ ಮರಳಿಸಲು ಹೇಗೆ ಸಾಧ್ಯ.
ಸಿಎ ನಿವೇಶನಕ್ಕೆ ಸಲ್ಲಿಸಿದ್ದ ಕೋರಿಕೆಯನ್ನು ಹಿಂಪಡೆಯಲಾಗಿದೆ.

ನಿವೇಶನ ಮಂಜೂರಾತಿಗೆ ಅರ್ಹವಾದ ಸಂಸ್ಥೆಗಳಲ್ಲಿ ಸಿದ್ದಾರ್ಥ ವಿಹಾರ ಟ್ರಸ್ಟ್ ಆಯ್ಕೆ ಆಗಿತ್ತು ಅಷ್ಟೇ.

ವಿಜಯೇಂದ್ರ ಯಡಿಯೂರಪ್ಪ ಅವರೇ, ನಿಮ್ಮ ಪ್ರೇರಣಾ ಟ್ರಸ್ಟ್ ಗೆ ಅಕ್ರಮವಾಗಿ ಮಂಜೂರು ಮಾಡಿಕೊಂಡಿದ್ದ ಭೂಮಿಯನ್ನು ಹಿಂದಿರುಗಿಸುವ ನೈತಿಕತೆ ತೋರಿಸುವಿರಾ?

ಶಾಲೆ ನಿರ್ಮಿಸುತ್ತೇನೆ ಎಂದು ಅಕ್ರಮವಾಗಿ ಸೈಟ್ ಪಡೆದು ಬಿರಿಯಾನಿ ಹೋಟೆಲ್ ನಿರ್ಮಿಸಿರುವ ಚಲವಾದಿ ನಾರಾಯಣಸ್ವಾಮಿಯವರು ಸೈಟ್ ಹಿಂದಿರುಗಿಸುವ ನೈತಿಕತೆ ತೋರಿಸುವರೇ ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read