alex Certify GOOD NEWS : ಬೆಂಗಳೂರಿಗರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರದಲ್ಲೇ ಕಾವೇರಿ -6 ನೇ ಹಂತದ ಯೋಜನೆಗೆ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಬೆಂಗಳೂರಿಗರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರದಲ್ಲೇ ಕಾವೇರಿ -6 ನೇ ಹಂತದ ಯೋಜನೆಗೆ ಚಾಲನೆ

ಬೆಂಗಳೂರು : ಈಗಾಗಲೇ ಕಾವೇರಿ 5 ನೇ ಹಂತದ ಯೋಜನೆಗೆ ಚಾಲನೆ ಸಿಕ್ಕಿದೆ, ಶೀಘ್ರದಲ್ಲೇ ಕಾವೇರಿ ಆರನೇ ಹಂತದ ಯೋಜನೆಗೆ ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಭವಿಷ್ಯದ ದಿನಗಳಲ್ಲಿ ಬೆಂಗಳೂರು ನಗರದ ಕುಡಿಯುವ ನೀರಿನ ಬೇಡಿಕೆಯನ್ನು ಗಮನದಲ್ಲಿ ಇರಿಸಿಕೊಂಡು ₹7,200 ಕೋಟಿ ವೆಚ್ಚದಲ್ಲಿ ಕಾವೇರಿ ಆರನೇ ಹಂತದ ಯೋಜನೆ ಕೈಗೆತ್ತಿಕೊಳ್ಳಲಾಗುವುದು. ಈ ಯೋಜನೆಯಿಂದ ನಗರಕ್ಕೆ ಪ್ರತಿದಿನ 5 ಕೋಟಿ ಲೀಟರ್ ನೀರು ಹೆಚ್ಚುವರಿಯಾಗಿ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷೆಯ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದಲ್ಲಿ ಚಾಲನೆ ನೀಡಿದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...