alex Certify ಇಂದು ಬೆಳಿಗ್ಗೆ 8ರಿಂದ ವಿಧಾನ ಪರಿಷತ್ ಉಪಚುನಾವಣೆ ಮತದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಬೆಳಿಗ್ಗೆ 8ರಿಂದ ವಿಧಾನ ಪರಿಷತ್ ಉಪಚುನಾವಣೆ ಮತದಾನ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆ ಮತದಾನ ಇಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮತದಾರರಾಗಿರುವ ಈ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಬಿಜೆಪಿಯಿಂದ ಕಿಶೋರ್ ಕುಮಾರ್ ಪುತ್ತೂರು, ಕಾಂಗ್ರೆಸ್ ನಿಂದ ರಾಜು ಪೂಜಾರಿ, ಎಸ್.ಡಿ.ಪಿ.ಐ.ನಿಂದ ಅನ್ವರ್ ಸಾದತ್, ಸ್ವತಂತ್ರ ಅಭ್ಯರ್ಥಿಯಾಗಿ ದಿನಕರ್ ಉಳ್ಳಾಲ್ ಸ್ಪರ್ಧಿಸಿದ್ದಾರೆ. ಮಂಗಳೂರಿನ ಸೈಂಟ್ ಅಲೋಸಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಅ. 24ರಂದು ಮತ ಎಣಿಕೆ ನಡೆಯಲಿದೆ. ಒಟ್ಟು 392 ಮತಗಟ್ಟೆಗಳಿದ್ದು, 6032 ಮತದಾರರಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...