alex Certify ಆಯತಪ್ಪಿ ಕೆರೆಗೆ ಬಿದ್ದು ಅಣ್ಣ, ತಂಗಿ ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಯತಪ್ಪಿ ಕೆರೆಗೆ ಬಿದ್ದು ಅಣ್ಣ, ತಂಗಿ ನಾಪತ್ತೆ

ಬೆಂಗಳೂರು: ಆಟವಾಡುವಾಗ ಅಣ್ಣ, ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವರ್ಷಾ ಲೇಔಟ್ ನ ಜಯಮ್ಮ ಎಂಬುವರ ಮಕ್ಕಳಾದ ಜಾನ್ಸನ್(13), ಮಹಾಲಕ್ಷ್ಮಿ(11) ಕೆರೆಗೆ ಬಿದ್ದ ಅಣ್ಣ, ತಂಗಿಯಾಗಿದ್ದಾರೆ. ಸೋಮವಾರ ಸಂಜೆ 5:30ಕ್ಕೆ ಕೆಂಗೇರಿ ಬಸ್ ನಿಲ್ದಾಣ ಎದುರಿನ ಕೆರೆಯಲ್ಲಿ ಘಟನೆ ನಡೆದಿದೆ.

ಜಾನ್ಸನ್ ಮತ್ತು ಮಹಾಲಕ್ಷ್ಮಿ ಕೆರೆಯ ವಾಕಿಂಗ್ ಪಾತ್ ನಲ್ಲಿ ಆಟವಾಡುತ್ತಿದ್ದಾಗ ಕೆರೆಗೆ ಬಿದ್ದ ಬಿಂದಿಗೆ ಎತ್ತಿಕೊಳ್ಳಲು ಮಹಾಲಕ್ಷ್ಮಿ ಕೆಳಗೆ ಇಳಿದಿದ್ದು, ಆಯತಪ್ಪ ನೀರಲ್ಲಿ ಬಿದ್ದಿದ್ದಾಳೆ. ತಂಗಿ ಮುಳುಗುವುದನ್ನು ಕಂಡ ಜಾನ್ಸನ್ ಕೂಡ ರಕ್ಷಣೆಗೆ ಮುಂದಾಗಿದ್ದು, ಈ ವೇಳೆ ಆತನೂ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ.

ಮಾಹಿತಿ ತಿಳಿದ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಇಬ್ಬರು ಮಕ್ಕಳಿಗಾಗಿ ಕೆರೆಯಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ ಮಕ್ಕಳು ಪತ್ತೆಯಾಗಿಲ್ಲ. ಕತ್ತಲು ಆವರಿಸಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದ್ದು, ಮಂಗಳವಾರ ಬೆಳಿಗ್ಗೆ ಮತ್ತೆ ಶೋಧ ಕಾರ್ಯ ಮುಂದುವರೆಯಲಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...