ಪಕ್ಷ ಸಂಘಟನೆ ಮೇಲೆ ಯಾವುದೇ ಪರಿಣಾಮವಿಲ್ಲ: ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ವಿಜಯೇಂದ್ರ ಪ್ರತಿಕ್ರಿಯೆ

ಬೆಂಗಳೂರು: ಪಕ್ಷ ಸಂಘಟನೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ಗುರಿ ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟಿಸುವುದಾಗಿದೆ. ನಾವು ಸಿ.ಪಿ. ಯೋಗೇಶ್ವರ್ ಮೇಲೆ ಅವಲಂಬಿತರಾಗಿರಲಿಲ್ಲ. ಕಾರ್ಯಕರ್ತರ ಪಡೆ ನಮಗೆ ಅಲ್ಲಿದೆ. ಪಕ್ಷವನ್ನು ಗಟ್ಟಿಗೊಳಿಸುತ್ತೇವೆ. ಯೋಗೇಶ್ವರ್ ಸಾಕಷ್ಟು ವಿಚಾರ ಹೇಳಬಹುದು, ಹೇಳಲಿ. ಎಲ್ಲವನ್ನು ಕಾಲವೇ ತೀರ್ಮಾನಿಸುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಾಡಿದ ಯೋಗೇಶ್ವರ್, ಕಾಂಗ್ರೆಸ್ ನಿಂದಲೇ ರಾಜಕೀಯ ಜೀವನ ಪ್ರಾರಂಭಿಸಿದ್ದೇನೆ. ಜನ ನನ್ನನ್ನು ಶಾಸಕನಾಗಿ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ. ಬಹಳ ಯೋಚನೆ ಮಾಡಿ ತೀರ್ಮಾನ ತೆಗೆದುಕೊಂಡಿದ್ದೇನೆ. ತಾಲೂಕಿನ ಒಳಿತಿಗೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read