alex Certify ಪ್ರಿಯತಮನ ಜೊತೆ ಸೇರಿ ಸುಪಾರಿ ಕೊಟ್ಟು ಪತಿಯ ಕೊಲೆಗೈದ ಪತ್ನಿ: ಮಹಿಳೆ ಸೇರಿ ಐವರು ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಿಯತಮನ ಜೊತೆ ಸೇರಿ ಸುಪಾರಿ ಕೊಟ್ಟು ಪತಿಯ ಕೊಲೆಗೈದ ಪತ್ನಿ: ಮಹಿಳೆ ಸೇರಿ ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಪ್ರಿಯತಮನ ಜೊತೆ ಸೇರಿ ಸುಪಾರಿ ಕೊಟ್ಟು ಪತಿಯನ್ನು ಕೊಲೆ ಮಾಡಿ ಏನೂ ಗೊತ್ತಿಲ್ಲ ಎಂಬಂತೆ ನಾಟಕವಾಡಿದ್ದ ಪತ್ನಿ ಸೇರಿ ಐವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪತ್ನಿ ನಾಗಮ್ಮ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕರೂರು ಗ್ರಾಮದ ದಂಪತಿ ತಿಪ್ಪೇಶ್ ಹಾಗೂ ನಾಗಮ್ಮ ಬೆಂಗಳೂರಿನ ಬೋಗೇನಹಳ್ಳಿ ಕೆರೆ ಬಳಿಯ ಲೇಬರ್ ಶೆಡ್ ನಲ್ಲಿ ಗಾರ್ಡನರ್ ಕೆಲಸ ಮಾಡಿಕೊಂಡು ವಾಸವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಆದರೆ ಅಕ್ರಮ ಸಂಬಂಧ ಹೊಂದಿದ್ದ ನಾಗಮ್ಮ ಪ್ರಿಯಕರನ ಜೊತೆ ಸೇರಿ ಸುಪಾರಿ ಕೊಟ್ಟು ಅ.14ರಂದು ಬೋಗೇನಹಳ್ಳಿ ಕೆರೆ ಬಳಿಯ ನೀಲಗಿರಿ ತೋಪಿನಲ್ಲಿ ಪತಿಯ ಹತ್ಯೆ ಮಾಡಿಸಿದ್ದಳು.

ಕೆರೆ ಬಳಿ ತಿಪ್ಪೇಶ್ ಶವ ಕಂದ ಸ್ಥಳೀಯರು ನಾಗಮ್ಮಗೆ ತಿಳಿಸಿದ್ದರು. ಪತಿಯ ಶವದ ಮುಂದೆ ಕಣ್ಣೀರಿಟ್ಟು ಗೋಳಾಡಿದ್ದ ನಾಗಮ್ಮ ತನಗೇನು ಗೊತ್ತೆ ಇಲ್ಲ ಎಂಬಂತೆ ನಾಟಕವಾಡಿದ್ದಳು. ಪೊಲೀಸರು ಅನುಮಾನಗೊಂಡು ತಮ್ಮದೇ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದ್ದು, ನಾಗಮ್ಮ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...