alex Certify ಮಾಜಿ ಸಚಿವರ ಪುತ್ರನಿಗೆ ಬ್ಲಾಕ್ ಮೇಲ್: 20 ಲಕ್ಷ ರೂ. ಸುಲಿಗೆಗಿಳಿದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಚಿವರ ಪುತ್ರನಿಗೆ ಬ್ಲಾಕ್ ಮೇಲ್: 20 ಲಕ್ಷ ರೂ. ಸುಲಿಗೆಗಿಳಿದ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಅರೆಸ್ಟ್

ಬೆಂಗಳೂರು: ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರ ಪುತ್ರನಿಗೆ ಬ್ಲಾಕ್ ಮೇಲ್ ಮಾಡಿ 20 ಲಕ್ಷ ರೂಪಾಯಿಗೆ ಸುಲಿಗೆಗೆ ಯತ್ನಿಸಿದ್ದ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಲಪಾಡ್ ಬ್ರಿಗೇಡ್ ಕಲಬುರಗಿ ಘಟಕದ ಅಧ್ಯಕ್ಷೆ ಮಂಜುಳಾ ಪಾಟೀಲ್ ಮತ್ತು ಅವರ ಪತಿ ಶಿವರಾಜ್ ಪಾಟೀಲ್ ಬಂಧಿತ ಆರೋಪಿಗಳಾಗಿದ್ದಾರೆ. ಮಾಲೀಕಯ್ಯ ಗುತ್ತೇದಾರ್ ಅವರ ಪತ್ರ ರಿತೇಶ್ ಗುತ್ತೇದಾರ್ ಅವರು ನೀಡಿದ ದೂರಿನ ಅನ್ವಯ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಸಿಸಿಬಿ ಪೊಲೀಸರು ಮಾಜಿ ಸಚಿವರ ಪುತ್ರನಿಗೆ ಬ್ಲಾಕ್ ಮೇಲ್ ಮಾಡಿದ ಮಂಜುಳಾ ಪಾಟೀಲ್, ಪತಿ ಶಿವರಾಜ್ ಪಾಟೀಲ್ ಅವರನ್ನು ಬಂಧಿಸಿದ್ದಾರೆ. ಮೂರು ದಿನದ ಹಿಂದೆ ರಿತೇಶ್ ಭೇಟಿಯಾಗಿದ್ದ ಆರೋಪಿಗಳು ನಿಮ್ಮ ತಂದೆ ನಿಂದನೆಯ ಸಂದೇಶ ಕಳುಹಿಸಿದ್ದಾರೆ ಎಂದು ಹೇಳಿದ್ದರು. ಇದು ಹೊರಗೆ ಬರದಂತೆ ಇರಲು 20 ಲಕ್ಷ ಕೊಡಬೇಕೆಂದು ಡಿಮ್ಯಾಂಡ್ ಮಾಡಿದ್ದರು. ಸಿಸಿಬಿ ಪೊಲೀಸರಿಗೆ ರಿತೇಶ್ ಈ ಕುರಿತಾಗಿ ದೂರು ನೀಡಿದ್ದರು. ಇಂದು ಹಣ ಕೊಡುವುದಾಗಿ ಕರೆಸಿಕೊಂಡಿದ್ದಾಗ ಬಂಧಿಸಲಾಗಿದೆ. ವಿಚಾರಣೆಗಾಗಿ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಎಂಟು ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...