alex Certify ಸಾಲು ಸಾಲು ರಜೆ, ದೀಪಾವಳಿಗೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ 2 ಸಾವಿರ ಹೆಚ್ಚುವರಿ ಬಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲು ಸಾಲು ರಜೆ, ದೀಪಾವಳಿಗೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ 2 ಸಾವಿರ ಹೆಚ್ಚುವರಿ ಬಸ್

ಬೆಂಗಳೂರು: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 2000 ಹೆಚ್ಚುವರಿ ಸೇವೆ ಒದಗಿಸಲಾಗಿದೆ.

ದೀಪಾವಳಿ ಮತ್ತು ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಅಕ್ಟೋಬರ್ 31 ರಿಂದ ನವೆಂಬರ್ 3ರವರೆಗೆ ಸಾಲು ಸಾಲು ರಜೆ ಇರುವ ಕಾರಣ ಬೆಂಗಳೂರಿನಿಂದ ಹೊರ ಜಿಲ್ಲೆಗಳು, ಹೊರ ರಾಜ್ಯಗಳಿಗೆ ತೆರಳುವವರಿಗಾಗಿ ಅಕ್ಟೋಬರ್ 30 ರಿಂದ ನವೆಂಬರ್ 1ರವರೆಗೆ ಎರಡು ಸಾವಿರ ಹೆಚ್ಚುವರಿ ಬಸ್ ಸೇವೆ ನೀಡಲಾಗುವುದು.

ಅಕ್ಟೋಬರ್ 31 ರಂದು ನರಕ ಚತುರ್ದಶಿ, ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ, ನವೆಂಬರ್ 2ರಂದು ಬಲಿಪಾಡ್ಯಮಿ ಹಾಗೂ ನವೆಂಬರ್ 3ರಂದು ಭಾನುವಾರ ಹೀಗೆ ಸತತ ನಾಲ್ಕು ದಿನಗಳ ಕಾಲ ರಜೆ ಇರುವುದರಿಂದ ಕೆಎಸ್ಆರ್ಟಿಸಿಯಿಂದ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬೆಂಗಳೂರಿನಿಂದ ವಿವಿಧೆಡೆಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...