ತುಮಕೂರು: ಕೆರೆಕೋಡಿ ನೋಡಲೆಂದು ಹೋಗಿದ್ದ ಯುವತಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ನಡೆದಿದೆ.
ಮೃತ ಯುವತಿಯನ್ನು ಗುಬ್ಬಿ ಮೂಲದ ಶಿವರಾಂಪುರ ಗ್ರಾಮದ ಸೋಮನಾಥ್ ಅವರ ಪುತ್ರಿ ಹಂಸ (19) ಮೃತ ದುರ್ದೈವಿ. ‘
ಮಂದಾರಗಿರಿ ಬೆಟ್ಟಕ್ಕೆ ಬಂದಿದ್ದ ಯುವತಿ, ಅಲ್ಲಿಯೇ ಸಮೀಪವಿರುವ ಮೈದಾಳ ಕೆರೆಕೋಡಿ ನೋಡಲು ಹೋಗಿದ್ದಳು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾಳೆ.
ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.