ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಗಳಲ್ಲಿ ಬೆಳೆ ವಿಮೆಗೆ ನೋಂದಾಯಿಸಲು ಅವಕಾಶ

ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆ ಜೋಳ, ನೀರಾವರಿ ಮತ್ತು ಮಳೆಯಾಶ್ರಿತ ಬೆಳೆ ಕಡಲೆ ಮತ್ತು ಬೇಸಿಗೆ ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆಗಳಾದ ನೆಲಗಡಲೆ(ಶೇಂಗಾ), ಭತ್ತ ಹಾಗೂ ಹೋಬಳಿ ಮಟ್ಟದ ಹಿಂಗಾರು ಹಂಗಾಮಿನ ನೀರಾವರಿ ಬೆಳೆ ಮುಸುಕಿನ ಜೋಳ, ನೀರಾವರಿ/ಮಳೆಯಾಶ್ರಿತ ಬೆಳೆ ಸೂರ್ಯಕಾಂತಿ, ಕುಸುಮೆ, ಈರುಳ್ಳಿ ಮತ್ತು ಬೇಸಿಗೆ ಹಂಗಾಮಿನ ನೀರಾವರಿ ಬೆಳೆಗಳಾದ ಸೂರ್ಯಕಾಂತಿ, ಈರುಳ್ಳಿ ಜಿಲ್ಲೆಯ ಬೆಳೆಗಳಾಗಿವೆ.

ಬೆಳೆ ವಿಮೆಗೆ ಕೊನೆಯ ದಿನ:

ಹಿಂಗಾರು ಹಂಗಾಮಿನ ಬೆಳೆಗಳಾದ ಜೋಳ, ಮುಸುಕಿನ ಜೋಳ, ಸೂರ್ಯಕಾಂತಿ, ಕುಸುಮೆ ಬೆಳೆಗಳಿಗೆ ಡಿ.16 ಆಗಿದೆ. ಅದರಂತೆ ಮಳೆಯಾಶ್ರಿತ ಬೆಳೆ ಜೋಳ ನ.15, ಈರುಳ್ಳಿ ಬೆಳೆಗೆ ನ.30.

ಬೇಸಿಗೆ ಬೆಳೆಗಳಾದ ಭತ್ತ, ನೆಲಗಡಲೆ(ಶೇಂಗಾ), ಸೂರ್ಯಕಾಂತಿ ಮತ್ತು ಈರುಳ್ಳಿ ಬೆಳೆಗಳಿಗೆ 2025 ರ ಫೆ.28 ಕೊನೆಯ ದಿನವಾಗಿದೆ. ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್/ಸಾರ್ವಜನಿಕ ಸೇವಾ ಕೇಂದ್ರಗಳಿಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read