SHOCKING: ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಸಿಡಿದು 150 ಜನರ ಕಣ್ಣಿಗೆ ಗಾಯ: 9 ಮಂದಿ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ

 ಬೆಂಗಳೂರು: ಪಟಾಕಿ ಸಿಡಿತದಿಂದ ಕಣ್ಣಿಗೆ ಗಾಯಗೊಂಡವರ ಸಂಖ್ಯೆ ಈ ವರ್ಷ ಭಾರಿ ಏರಿಕೆಯಾಗಿದೆ. ಸುಮಾರು 150 ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. 30 ಜನರ ಕಣ್ಣಿಗೆ ಗಂಭೀರ ಗಾಯಗಳಾಗಿವೆ. 9 ಜನ ದೃಷ್ಟಿ ಕಳೆದುಕೊಳ್ಳುವ ಸಂಭವವಿದೆ ಎಂದು ಹೇಳಲಾಗಿದೆ.

ದೀಪಾವಳಿ ಹಬ್ಬದ ಆರಂಭದಿಂದ ಭಾನುವಾರ ಸಂಜೆಯವರೆಗೆ ನಾರಾಯಣ ನೇತ್ರಾಲಯದ ಆಸ್ಪತ್ರೆಗಳಲ್ಲಿ 73 ಜನ ಪಟಾಕಿಗೆ ಸಂಬಂಧಿಸಿದ ಗಾಯಗಳಿಗೆ ಚಿಕಿತ್ಸೆ ಪಡೆದಿದ್ದಾರೆ. ಇವರಲ್ಲಿ 35 ಮಕ್ಕಳು ಸೇರಿದ್ದಾರೆ. 73 ಜನರಲ್ಲಿ ಅರ್ಧದಷ್ಟು ಜನ ಪಟಾಕಿ ಸಿಡಿಸುವುದನ್ನು ನೋಡುತ್ತಾ ನಿಂತಿದ್ದ ವೇಳೆ, ಅದೇ ಮಾರ್ಗದಲ್ಲಿ ಹೋಗುವ ದಾರಿಹೋಕರು ಪಟಾಕಿ ಕಿಡಿ ಸಿಡಿದು ಗಾಯಗೊಂಡಿದ್ದಾರೆ. ಉಳಿದವರು ಪಟಾಕಿ ಸಿಡಿಸುವಾಗ ಗಾಯ ಮಾಡಿಕೊಂಡಿದ್ದಾರೆ.

19 ಜನರಿಗೆ ಗಂಭೀರ ಗಾಯಗಳಾಗಿವೆ. ಮಿಂಟೋ ಆಸ್ಪತ್ರೆ ಯಲ್ಲಿ 54 ಜನರಿಗೆ ಚಿಕಿತ್ಸೆ ನೀಡಲಾಗಿದೆ. ನಾರಾಯಣ ನೇತ್ರಾಲಯದಲ್ಲಿ 73 ಜನರಿಗೆ, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 18, ಅಗರ್ವಾಲ್ ಕಣ್ಣಿನ ಆಸ್ಪತ್ರೆಯಲ್ಲಿ 15 ಜನ ಪಟಾಕಿ ಸಿಡಿತದ ಗಾಯಗಳಿಗೆ ಚಿಕಿತ್ಸೆ ಪಡೆದುಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read