BREAKING : ತುಮಕೂರಿನಲ್ಲಿ ಘೋರ ಘಟನೆ : ಎತ್ತಿನಹೊಳೆ ಕಾಮಗಾರಿ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು.!

ತುಮಕೂರು : ಎತ್ತಿನಹೊಳೆ ಕಾಮಗಾರಿ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ತಿಪಟೂರು ತಾಲೂಕಿನ ಹುಚ್ಚನಹಟ್ಟಿ ಗ್ರಾಮದ ಸಮೀಪ ನಡೆದಿದೆ.

ಎತ್ತಿನಹೊಳೆ ನಾಲೆಯ ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ.
ಹುಚ್ಚನಹಟ್ಟಿ ಗ್ರಾಮದ ಯದುವೀರ್ (8) ಮನೋಹರ್ (10) ಮೃತರು ಎಂದು ಗುರುತಿಸಲಾಗಿದೆ.

ಹುಚ್ಚನಹಟ್ಟಿ ಗ್ರಾಮದ ಬಳಿ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿದ್ದು, ಆಟವಾಡುತ್ತಾ ಹೋದ ಮಕ್ಕಳು ಗುಂಡಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.  ಶಾಲೆಗೆ ಹೋಗಿದ್ದ ಮಕ್ಕಳು ನಾಪತ್ತೆಯಾಗಿದ್ದರು. ಆತಂಕಗೊಂಡ ಪೋಷಕರು ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಂತರ ಶೋಧ ನಡೆಸಿದಾಗ ಬಾಲಕರ ಶವ ಪತ್ತೆಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read