ವರ್ಣನಿಂದಕ, ಜನಾಂಗೀಯ ದ್ವೇಷಿ ಮಿಸ್ಟರ್ ಜಮೀರ್ : ಟ್ವೀಟ್ ನಲ್ಲಿ ಜೆಡಿಎಸ್ ವಾಗ್ವಾಳಿ

ಬೆಂಗಳೂರು : ಮನುಷ್ಯರ ಚರ್ಮ ಕಪ್ಪಾದರೇನು, ಬಿಳಿಯಾದರೇನು ? ಇಷ್ಟೊಂದು ಕೀಳು ಮನಸ್ಥಿತಿಯ ವ್ಯಕ್ತಿ ಜಮೀರ್ ಅವರನ್ನು ಈ ಕೂಡಲೇ ವಜಾ ಮಾಡಿ ಎಂದು ಜೆಡಿಎಸ್ ಕಿಡಿಕಾರಿದೆ.

ಮಾಜಿ ಸಿಎಂ ಕುಮಾರಸ್ವಾಮಿಯನ್ನು ಕರಿಯ ಎಂದ ವಿಚಾರಕ್ಕೆ ಸಚಿವ ಜಮೀರ್ ವಿರುದ್ಧ ಜೆಡಿಎಸ್ ಕಿಡಿಕಾರಿದೆ.
ನಿನ್ನನ್ನು ರಾಜಕೀಯವಾಗಿ ಬೆಳೆಸಿದ್ದ ದೇವೇಗೌಡರ ಕುಟುಂಬವನ್ನೇ ಖರೀದಿ ಮಾಡುತ್ತೇನೆ ಎನ್ನುವ ನಿನ್ನ ಅಧಿಕಾರ ಮತ್ತು ದುಡ್ಡಿನ ದರ್ಪ ಹೆಚ್ಚು ದಿನ ಉಳಿಯಲ್ಲ.. ನಿನ್ನ ಸೊಕ್ಕಿನ ಮಾತಿಗೆ, ಕಪ್ಪು ವರ್ಣದ ಬಗ್ಗೆ ನಿನಗಿರುವ ಹೊಲಸು ಮನಸ್ಥಿತಿಗೆ ರಾಜ್ಯದ ಜನರು ತಕ್ಕ ಉತ್ತರ ನೀಡುತ್ತಾರೆ. • ಕನ್ನಡಿಗರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಬಣ್ಣ ಯಾವುದು ? • ಹೆಚ್.ಸಿ. ಮಹದೇವಪ್ಪ ಅವರ ಬಣ್ಣ ಯಾವುದು ? • ಸತೀಶ್ ಜಾರಕಿಹೊಳಿ ಅವರ ಬಣ್ಣ ಯಾವುದು ? • ಪ್ರಿಯಾಂಕ್ ಖರ್ಗೆ ಅವರ ಬಣ್ಣ ಯಾವುದು ? • ಕೆ.ಹೆಚ್. ಮುನಿಯಪ್ಪ ಅವರ ಬಣ್ಣ ಯಾವುದು ? • ಕೆ.ಜೆ. ಜಾರ್ಜ್ ಅವರ ಬಣ್ಣ ಯಾವುದು ? • ಡಿ.ಕೆ. ಸುರೇಶ್ ಅವರ ಬಣ್ಣ ಯಾವುದು ? • ರಹೀಮ್ ಖಾನ್ ಅವರ ಬಣ್ಣ ಯಾವುದು ? ಮನುಷ್ಯರ ಚರ್ಮ ಕಪ್ಪಾದರೇನು, ಬಿಳಿಯಾದರೇನು ? ಇಷ್ಟೊಂದು ಕೀಳು ಮನಸ್ಥಿತಿಯ ವ್ಯಕ್ತಿ ಜಮೀರ್ ಅವರನ್ನು ಈ  ಸಂಪುಟದಿಂದ ವಜಾಮಾಡಿ ಎಂದು ಜೆಡಿಎಸ್ ಆಗ್ರಹಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read