ಇಸ್ಲಾಂ ಧರ್ಮ ಸೇರಲು ಸಿದ್ಧತೆ ಮಾಡಿಕೊಂಡಿದ್ದರು: ಡಾ. ಅಂಬೇಡ್ಕರ್ ಬಗ್ಗೆ ವಿವಾದಿತ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡ ಖಾದ್ರಿ

ಹಾವೇರಿ: ಡಾ. ಬಿ.ಆರ್. ಅಂಬೇಡ್ಕರ್ ಅವರು ಇಸ್ಲಾಂ ಧರ್ಮಕ್ಕೆ ಸೇರಲು ಸಿದ್ಧತೆ ಮಾಡಿಕೊಂಡಿದ್ದರು ಎಂದು ಕಾಂಗ್ರೆಸ್ ಮುಖಂಡ ಅಜ್ಜಂಪೀರ್ ಖಾದ್ರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಶಿಗ್ಗಾವಿಯಲ್ಲಿ ಆದಿ ಜಾಂಬವ ಸಮಾಜದ ಸಮಾವೇಶದಲ್ಲಿ ಮಾತನಾಡಿದ ಅಜ್ಜಂಪೀರ್ ಖಾದ್ರಿ, ಅಂಬೇಡ್ಕರ್ ಇಸ್ಲಾಂ ಸೇರಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಕೊನೆ ಕ್ಷಣದಲ್ಲಿ ಬೌದ್ಧ ಧರ್ಮ ಸ್ವೀಕರಿಸಿದರು ಎಂದು ನಾನು ಓದಿದ್ದೆ ಎಂದು ಹೇಳಿದ್ದಾರೆ.

ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕರಿಸದಿದ್ದರೆ ದಲಿತರು ಮುಸ್ಲಿಂ ಆಗುತ್ತಿದ್ದರು. ಆರ್.ಬಿ. ತಿಮ್ಮಾಪುರ ಹೋಗಿ ರಹೀಮ್ ಖಾನ್ ಆಗುತ್ತಿದ್ದರು. ಡಾ.ಜಿ. ಪರಮೇಶ್ವರ್ ಹೋಗಿ ಪೀರ್ ಸಾಹೇಬ್ ಆಗುತ್ತಿದ್ದರು. ಎಲ್. ಹನುಮಂತಪ್ಪ ಹೋಗಿ ಹಸನ್ ಸಾಬ್ ಆಗುತ್ತಿದ್ದರು. ಈಗಲೂ ಎಲ್ಲಿ ದಲಿತರ ಕೇರಿ ಇದೆಯೋ ಅಲ್ಲಿ ದರ್ಗಾ ಇದೆ. ದಲಿತರು, ಮುಸ್ಲಿಮರ ನಡುವಿನ ಬಾಂಧವ್ಯ ಹಾಗೆಯೇ ಇದೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read