ಶಾಲೆಗೆ ಹೋಗದೇ ರೈಲು ನಿಲ್ದಾಣಕ್ಕೆ ಬಂದ ಮಕ್ಕಳ ರಕ್ಷಣೆ

ಶಿವಮೊಗ್ಗ: ಶಾಲೆಗೆ ಹೋಗಲು ಇಷ್ಟವಿಲ್ಲದ ನಾಲ್ವರು ಮಕ್ಕಳು ಶಿವಮೊಗ್ಗದ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಾರೆ. ಅವರನ್ನು ರಕ್ಷಿಸಿದ ಆರ್.ಪಿ.ಎಫ್. ಪೊಲೀಸರು ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ.

ಶಿವಮೊಗ್ಗ ನಗರದ ಗಾಡಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಒಂದು, ಮೂರು ಮತ್ತು ಏಳನೇ ತರಗತಿಯಲ್ಲಿ ಓದುತ್ತಿರುವ ಬೆಂಗಳೂರು ಕಾಮಾಕ್ಷಿಪುರದ ಮಕ್ಕಳು ಶಾಲೆಯಿಂದ ತಪ್ಪಿಸಿಕೊಂಡು ಶಿವಮೊಗ್ಗ ರೈಲು ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ಕುಳಿತಿದ್ದಾರೆ. ಮಕ್ಕಳನ್ನು ಗಮನಿಸಿದ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಶಾಲೆಗೆ ಹೋಗಲು ಇಷ್ಟವಿಲ್ಲದೆ ಬಂದಿರುವುದಾಗಿ ತಿಳಿಸಿದ್ದಾರೆ. ಮಕ್ಕಳ ಮನವೊಲಿಸಿದ ಪೊಲೀಸರು ಅವರನ್ನು ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read