ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 25 ಕೋಟಿ ರೂ. ಮಂಜೂರು

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಡಿಸೆಂಬರ್ 22 ರಿಂದ 22 ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರ 25 ಕೋಟಿ ರೂ. ಅನುದಾನ ಬಿಡುಗಡೆಗೆ ಮಂಜೂರಾತಿ ನೀಡಿದೆ.

ಸಮ್ಮೇಳನಕ್ಕೆ 30 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮಂಡ್ಯ ಜಿಲ್ಲಾಧಿಕಾರಿ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ತಿಗೆ ಸಹಾಯಾನುದಾನದಡಿ 10 ಕೋಟಿ ರೂ., ಹೆಚ್ಚುವರಿಯಾಗಿ 15 ಕೋಟಿ ರೂಪಾಯಿ ಮಂಡ್ಯ ಜಿಲ್ಲಾಡಳಿತಕ್ಕೆ ಬಿಡುಗಡೆ ಮಾಡಲು ಆದೇಶಿಸಿದೆ.

ಹಂಚಿಕೆಯಾದ ಅನುದಾನದ ಮಿತಿಯಲ್ಲಿಯೇ ಯೋಜನೆಗಳನ್ನು ರೂಪಿಸಬೇಕು. ಅಂದಾಜು ವೆಚ್ಚ ಮತ್ತು ಸಂಬಂಧಿಸಿದ ದಾಖಲೆಗಳನ್ನು ಪಡೆದು ಸರ್ಕಾರಕ್ಕೆ ಸಲ್ಲಿಸುವಂತೆ ಮಂಡ್ಯ ಜಿಲ್ಲಾಡಳಿತಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read