BREAKING: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ 30ಕ್ಕೂ ಅಧಿಕ ಮಂದಿಗೆ ಗಾಯ

ಹಾವೇರಿ: ಹಾವೇರಿಯ ನಾಗೇಂದ್ರನಮಟ್ಟಿಯಲ್ಲಿ ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮೂವತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ಘಟನೆಯಲ್ಲಿ ಓರ್ವ ವ್ಯಕ್ತಿಯ ಕಣ್ಣುಗುಡ್ಡೆ ಕಿತ್ತು ಹೋಗಿರುವ ಮಾಹಿತಿ ಗೊತ್ತಾಗಿದೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹಾವೇರಿಯ ಜಿಲ್ಲಾಸ್ಪತ್ರೆ ಮತ್ತು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಗಾಯಾಳುಗಳನ್ನು ದಾಖಲಿಸಲಾಗಿದೆ.

ಎದೆ ಭಾಗ, ಕೈ, ಕಾಲು ದೇಹದ ವಿವಿಧ ಭಾಗಗಳಿಗೆ ಹೋರಿ ತಿವಿತದಿಂದ ಅನೇಕರು ಗಾಯಗೊಂಡಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read