ರಾಗಿಯಂತ್ರದ ಟ್ರ್ಯಾಕ್ಟರ್ ಪಲ್ಟಿಯಾಗಿ ದುರಂತ: ಇಬ್ಬರು ಕಾರ್ಮಿಕರು ಸಾವು

ದಾವಣಗೆರೆ: ರಾಗಿ ಬೇರ್ಪಡಿಸುವ ಯಂತ್ರದ ಟ್ರ್ಯಾಕ್ಟರ್ ಪಲ್ಟಿಯಾಗಿ ಅದರ ಕೆಳಗೆ ಸಿಲುಕಿದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ನಡೆದಿದೆ.

ಮಹೇಶ್ (30) ಹಾಗೂ ರಾಧಮ್ಮ (45) ಮೃತ ದುರ್ದೈವಿಗಳು. ರಾಗಿಯಂತ್ರದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇಬ್ಬರು ಕಾರ್ಮಿಕರು ಟ್ರ್ಯಾಕ್ಟರ್ ಅಡಿ ಸಿಲುಕಿ ಸಾವನ್ನಪ್ಪಿದ್ದಾರೆ.

ಬೈರಾನಾಯಕನಹಳ್ಳಿ ಗ್ರಾಮದಲ್ಲಿ ರಾಗಿ ಕಟಾವ್ ಮಾಡಿ ಹುಲ್ಲು ಬೇರ್ಪಡಿಸಿ ವಾಪಾಸ್ ಆಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read