ಬೆಂಗಳೂರು : ಕೊಳವೆ ಬಾವಿ ಮಾಲೀಕರೇ ಎಚ್ಚರ ..ಇನ್ಮುಂದೆ ಸುರಕ್ಷತಾ ಕ್ರಮ ಉಲ್ಲಂಘಿಸಿದ್ರೆ 1 ವರ್ಷ ಜೈಲು ಶಿಕ್ಷೆ, 20 ಸಾವಿರ ದಂಡ ಬೀಳುವುದು ಗ್ಯಾರೆಂಟಿ..!
ಕೊಳವೆ ಬಾವಿಗಳಲ್ಲಿ ಮಕ್ಕಳು ಅಪಘಾತಕ್ಕೀಡಾಗುವುದನ್ನು ತಪ್ಪಿಸುವ ಸಲುವಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಮುಂಬರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಶಿಕ್ಷೆಯ ಪ್ರಮಾಣ ಹೀಗಿದೆ: ಕೊಳವೆ ಬಾವಿ ದುರಂತ ಸಂಭವಿಸಿದಲ್ಲಿ ಅದರ ಮಾಲೀಕರಿಗೆ ಅಥವಾ ತಪ್ಪಿತಸ್ಥರಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಲಾಗುವುದು. ಕೊಳವೆ ಬಾವಿಗಳ ಬಳಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ವಿಫಲರಾದರೆ ₹5 ಸಾವಿರ ದಂಡ ಮತ್ತು 3 ತಿಂಗಳ ಜೈಲು ಶಿಕ್ಷೆಗೆ ಅವಕಾಶ ಕೊಳವೆ ಬಾವಿ ಕೊರೆಯುವ ಭೂ ಮಾಲೀಕರು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಿದ್ದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಮತ್ತು ₹20 ಸಾವಿರ ದಂಡವಿಧಿಸಲು ಅವಕಾಶ ಇರಲಿದೆ.
ಕೊಳವೆ ಬಾವಿಗಳಲ್ಲಿ ಮಕ್ಕಳು ಅಪಘಾತಕ್ಕೀಡಾಗುವುದನ್ನು ತಪ್ಪಿಸುವ ಸಲುವಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಮುಂಬರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಶಿಕ್ಷೆಯ ಪ್ರಮಾಣ ಹೀಗಿದೆ:
ಕೊಳವೆ ಬಾವಿ ದುರಂತ… pic.twitter.com/8Vgp9WSdWk— Siddaramaiah (@siddaramaiah) November 28, 2024