BREAKING : ‘ಚುನಾವಣಾ ಬಾಂಡ್’ ಹೆಸರಿನಲ್ಲಿ ಸುಲಿಗೆ ಆರೋಪ : ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶ |High Court

ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪದ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಏಕಸದಸ್ಯ ಪೀಠ ಇಂದು ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪದ ಹಿನ್ನೆಲೆ ನಿರ್ಮಲಾ ಸೀತಾರಾಮನ್ ಹಾಗೂ ನಳಿನ್ ಕುಮಾರ್ ಕಟೀಲು  ಹಾಗೂ ಮತ್ತಿತರರ  ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಮತ್ತಿತರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ದೂರುದಾರ ಆದರ್ಶ ಅಯ್ಯರ್ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹಾಗೂ ನಳೀನ್ ಕುಮಾರ್ ಕಟೀಲ್ ಪರ ವಕೀಲ ಕೆ.ಜಿ.ರಾಘವನ್ ಅವರ ವಾದ-ಪ್ರತಿವಾದ ಆಲಿಸಿತು. ವಾದ-ಪ್ರತಿವಾದ ಆಲಿಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ, ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಹೈಕೋರ್ಟ್ ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read