ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಬೀದರ್: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರನ ತಪ್ಪಿ ಏಕಾಏಕಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ.

ಇಲ್ಲಿನ ಧರಿಹನುಮಾನ್ ಕ್ರಾಸ್ ನಲ್ಲಿ ಈ ಅವಘಡ ಸಂಭವಿಸಿದೆ. 47 ವರ್ಷದ ಶಿವಕುಮಾರ್ ಪೊಲೀಸ್ ಪಾಟೀಲ್ ಎಂಬುವವರು ಸಾವನ್ನಪ್ಪಿದ್ದಾರೆ.

ಔರಾದ್ ನ ಧೂಪತ್ ಮಹಾಗಾಂವ್ ನಿವಾಸಿಯಾಗಿದ್ದ ಶಿವಕುಮಾರ್, ಸಂತಪೂರ್ ನಿಂದ ತನ್ನ ಸ್ವಗ್ರಾಮಕ್ಕೆ ಕಾರಿನಲ್ಲಿ ಹೋಗುತ್ತಿದ್ದರು. ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಬಿದ್ದಿದೆ. ಸ್ಥಳದಲ್ಲೇ ಶಿವಕುಮಾರ್ ಸಾವನ್ನಪ್ಪಿದ್ದಾರೆ.

ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read