BIG NEWS: ಇಂದು ದಕ್ಷಿಣ ಭಾರತದ 4 ರಾಜ್ಯಗಳಿಗೆ ಬೇಕಾದ ನಕ್ಸಲರ ಶರಣಾಗತಿ: ಚಿಕ್ಕಮಗಳೂರಿನಲ್ಲಿ ಕೂಂಬಿಂಗ್ ಸ್ಥಗಿತ

ಚಿಕ್ಕಮಗಳೂರು: ಇಂದು ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಯಾಗಲಿದ್ದಾರೆ, ದಕ್ಷಿಣ ಭಾರತದ ನಾಲ್ಕು ರಾಜ್ಯಗಳಿಗೆ ಬೇಕಾಗಿರುವ 6 ನಕ್ಸಲರು ಶರಣಾಗಲಿದ್ದಾರೆ.

ನಕ್ಸಲರ ಶರಣಾಗತಿಯ ಬಗ್ಗೆ ಸರ್ಕಾರ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ತಮಿಳುನಾಡಿನ ಕೆ. ವಸಂತ ಅಲಿಯಾಸ್ ರಮೇಶ, ಕೇರಳದ ಜೀಶಾನ್, ಆಂಧ್ರಪ್ರದೇಶದ ಮಾರಪ್ಪ ಆರೋಲಿ ಶರಣಾಗತಿ ಫೈನಲ್ ಆಗಿದೆ.

ಈ ಕುರಿತಾಗಿ ನಿನ್ನೆ ಶಾಂತಿಗಾಗಿ ನಾಗರಿಕ ವೇದಿಕೆ ವತಿಯಿಂದ ಜಿಲ್ಲಾಡಳಿತದ ಜೊತೆಗೆ ಮಾತುಕತೆ ನಡೆದಿದ್ದು, ಮಾಜಿ ನಕ್ಸಲರು ಮತ್ತು ಅವರ ಕುಟುಂಬದವರ ಸಮ್ಮುಖದಲ್ಲಿ ಶರಣಾಗತಿ ಪ್ರಕ್ರಿಯೆ ನಡೆಯಲಿದೆ. ನಕ್ಸಲರ ಶರಣಾಗತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕೂಂಬಿಂಗ್ ಸ್ಥಗಿತಗೊಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read