ಫೈನಾನ್ಸ್ ಕಿರುಕುಳಕ್ಕೆ ನೊಂದು ದೂರು ನೀಡಲು ಹೋದ ಮಹಿಳೆಯರಿಗೆ ದಂಡ ವಿಧಿಸಿದ ಪೊಲೀಸರು

ಹಾವೇರಿ: ರಾಜ್ಯದಲ್ಲಿ ಫೈನಾನ್ಸ್, ಮೈಕ್ರೋ ಫೈನಾನ್ಸ್ ನವರ ಕಿರುಕುಳಕ್ಕೆ ಬೇಸತ್ತು ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಈ ನಡುವೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದ ಬಗ್ಗೆ ದೂರು ನೀಡಲು ಹೋದ ಮಹಿಳೆಯರಿಗೆ ಪೊಲೀಸರೇ ದಂಡ ವಿಧಿಸಿರುವ ಆರೋಪ ಕೇಳಿಬಂದಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಗುಡ್ಡದ ಬೇವಿನಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೈಕ್ರೋ ಫೈನಾನ್ಸ್ ನವರ ಕಾಟದ ಬಗ್ಗೆ ದೂರು ನೀಡಲು ಹೋದ ಇಬ್ಬರು ಮಹಿಳೆಯರಿಗೆ ಪೊಲೀಸ್ ಸಿಬ್ಬಂದಿ ಬೆದರಿಸಿ ದಂಡ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹಲಗೇರಿ ಠಾಣೆ ಪೊಲೀಸರು ಈ ರೀತಿ ವರ್ತಿಸುತ್ತಿದ್ದು, ಫೈನನಸ್ ನವರ ಕಿರುಕುಳಕ್ಕೆ ಜನರ ದೂರಿಗೆ ಸ್ಪಂದಿಸಬೇಕಾದ ಪೊಲೀಸರು, ಫೈನಾನ್ಸ್ ನವರ ಪರ ನಿಂತಿದ್ದು, ದೂರು ನೀಡಲು ಹೋದವರಿಂದಲೂ ದಂಡ ವಸೂಲಿ ಮಾಡುತ್ತಿದ್ದಾರೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read