ಹಾವೇರಿ: ಮನೆ ಕಳ್ಳತನಕ್ಕೆ ಬಂದ ಇಬ್ಬರು ಕಳ್ಳರು ಸಿಕ್ಕಿಹಾಕಿಕೊಂಡಿದ್ದು, ಕಳ್ಳರನ್ನು ಕಂಬಕ್ಕೆ ಕಟ್ತಿಹಾಕಿ ಗ್ರಾಮಸ್ಥರು ಧರ್ಮದೇಟು ನೀಡಿರುವ ಘಟನೆ ಹಾವೇರಿ ಜಿಲ್ಲೆಯ ಸಂಗೂರು ಗ್ರಾಮದಲ್ಲಿ ನಡೆದಿದೆ.
ಬಸವರಾಜ್ ಹೊಸೂರು ಎಂಬುವವರ ಮನೆಗೆ ಕಳ್ಳತನ ಮಾಡಲೆಂದು ಇಬ್ಬರು ಕಳ್ಳರು ನುಗ್ಗಿದ್ದಾರೆ. ಈ ವೇಳೆ ಮನೆಯವರು ಹಾಗೂ ಗ್ರಾಮಸ್ಥರು ಸೇರಿ ಕಳ್ಳರನ್ನು ಹಿಡಿದು ಕಂಬಕ್ಕೆ ಕಟ್ಟಿಹಾಕಿದ್ದಾರೆ.
ಹೀಗೆ ಕಂಬಕ್ಕೆ ಕಟ್ಟಿ ಹಾಕಿ ಇಬ್ಬರು ಕಳ್ಳರಿಗೂ ಧರ್ಮದೇಟು ನೀಡಿದ್ದಾರೆ. ಹನುಮಂತಪ್ಪ ಹಾಗೂ ಗಂಗಪ್ಪ ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮರು. ಬಳಿಕ ಇಬ್ಬರನ್ನೂ ಪೊಲೀಸರಿಗೆ ಒಪ್ಪಿಸಲಾಗಿದೆ.