![](https://kannadadunia.com/wp-content/uploads/2024/07/naxal-army-d.png)
ಛತ್ತೀಸ್ ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಛತ್ತೀಸ್ ಗಢದ ಬಿಜಾಪುರದಲ್ಲಿ ಭದ್ರತಾಪಡೆಗಳು 12 ನಕ್ಸಲರನ್ನು ಹತ್ಯೆ ಮಾಡಿದ್ದಾರೆ.
ನಕ್ಸಲರು ಹಾಗೂ ಭದ್ರತಾಪಡೆಗಳ ನಡುವಿನ ಗುಂಡಿನ ಚಕಮಕಿ ವೇಳೆ 12 ನಕ್ಸಲರನ್ನು ಸದೆಬಡಿಯಲಾಗಿದೆ. ಕಾರ್ಯಾಚರಣೆ ವೇಳೆ ನಾಲ್ವರು ಯೋಧರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜಾಪುರದಲ್ಲಿ ಇನ್ನಷ್ಟು ನಕ್ಸಲರು ಅಡಗಿದ್ದು, ಅಡಗಿರುವ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.