alex Certify ಕುಂಭಮೇಳಕ್ಕೆ ತೆರಳುವ ಭಕ್ತರಿಂದ ರೈಲಿನಲ್ಲಿ ನೂಕುನುಗ್ಗಲು; ಸೀಟು ಸಿಗದ ಆಕ್ರೋಶದಲ್ಲಿ ಗಾಜು ಪುಡಿಪುಡಿ | Video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಂಭಮೇಳಕ್ಕೆ ತೆರಳುವ ಭಕ್ತರಿಂದ ರೈಲಿನಲ್ಲಿ ನೂಕುನುಗ್ಗಲು; ಸೀಟು ಸಿಗದ ಆಕ್ರೋಶದಲ್ಲಿ ಗಾಜು ಪುಡಿಪುಡಿ | Video

ಮಹಾ ಕುಂಭ ಮೇಳಕ್ಕೆ ತೆರಳುವ ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ರೈಲುಗಳಲ್ಲಿ ಭಾರಿ ನೂಕುನುಗ್ಗಲು ಉಂಟಾಗಿದೆ. ಪ್ರಯಾಣಿಕರು ಟಿಕೆಟ್ ಇದ್ದರೂ ರೈಲು ಹತ್ತಲು ಸಾಧ್ಯವಾಗದೆ ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಕೆಲವೆಡೆ ಪ್ರಯಾಣಿಕರು ಆಕ್ರೋಶಗೊಂಡು ರೈಲುಗಳ ಗಾಜುಗಳನ್ನು ಒಡೆದು ಹಾನಿ ಮಾಡಿದ್ದಾರೆ.

ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಸ್ವಾತಂತ್ರ್ಯ ಸೇನಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರು ನುಗ್ಗಲು ಯತ್ನಿಸಿದರು. ಈ ವೇಳೆ ಕೆಲವರು ರೈಲಿನ ಗಾಜುಗಳನ್ನು ಒಡೆದರು. ನವಾಡದಲ್ಲಿಯೂ ಇದೇ ರೀತಿಯ ಘಟನೆ ನಡೆದಿದೆ. ಇಲ್ಲಿ ಗೋಡ್ಡಾ-ನ್ಯೂ ಡೆಲ್ಲಿ ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರು ನೂಕುನುಗ್ಗಲು ನಡೆಸಿದರು.

ಈ ಘಟನೆಗಳಿಂದಾಗಿ ರೈಲುಗಳು ತಡವಾಗಿ ಚಲಿಸಿದವು. ಪ್ರಯಾಣಿಕರು ರೈಲು ನಿಲ್ದಾಣಗಳಲ್ಲಿ ಗಂಟೆಗಟ್ಟಲೆ ಕಾಯುವಂತಾಯಿತು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...