ಮೈಸೂರು : ಉದಯರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿದ ಪೋಸ್ಟ್ ಹಾಕಿದ್ದ ಆರೋಪಿ ಸತೀಶ್ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಇಂದು ಆರೋಪಿ ಜೈಲಿನಿಂದ ರಿಲೀಸ್ ಆಗಿದ್ದಾರೆ.
ಆರೋಪಿ ಸತೀಶ್ ಗೆ ಮೈಸೂರು ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. 2 ನೇ ಅಪರ ಸಿವಿಲ್ ಕೋರ್ಟ್ ಈ ಆದೇಶ ಪ್ರಕಟಿಸಿದೆ.
ಫೆಬ್ರವರಿ 10 ರಂದು ಅವಹೇಳನಕಾರಿ ಪೋಸ್ಟ್ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಉದಯಗಿರಿ ಪೊಲೀಸ್ ಠಾಣೆ ಮೇಲೆ ಅನ್ಯಕೋಮಿನ ಗುಂಪು ಕಲ್ಲು ತೂರಾಟ ನಡೆಸಿತ್ತು. ಘಟನೆಯಲ್ಲಿ 14 ಮಂದಿ ಪೊಲೀಸರು ಗಾಯಗೊಂಡಿದ್ದರು ಹಾಗೂ ಹಲವು ಪೊಲೀಸ್ ವಾಹನಗಳು ಜಖಂ ಆಗಿದ್ದವು. ಪೊಲೀಸರು ಹಲವು ಎಫ್ ಐ ಆರ್ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು.