alex Certify BREAKING : ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ವೈದ್ಯೆ ಕೊಪ್ಪಳದ ತುಂಗಾಭದ್ರಾ ನದಿಯಲ್ಲಿ ಮುಳುಗಿ ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ವೈದ್ಯೆ ಕೊಪ್ಪಳದ ತುಂಗಾಭದ್ರಾ ನದಿಯಲ್ಲಿ ಮುಳುಗಿ ಸಾವು.!

ಕೊಪ್ಪಳ : ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ವೈದ್ಯೆ ಸಾವನ್ನಪ್ಪಿದ ಘಟನೆ ತಾಲೂಕಿನ ಸಣಾಪುರದ ಬಳಿ ನಡೆದಿದೆ. ನೀರಿನಲ್ಲಿ ನಾಪತ್ತೆಯಾದ ವೈದ್ಯೆಯನ್ನು ಹೈದರಾಬಾದ್ ಮೂಲದ ನಾಂಪಲ್ಲಿ ಪ್ರದೇಶದ ನಿವಾಸಿ ಅನನ್ಯಾ ರಾವ್ ಎಂದು ಗುರುತಿಸಲಾಗಿದೆ.

ಹೈದರಾಬಾದ್ ನ ವಿಕೆಸಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸ್ನೇಹಿತರ ಜೊತೆ ಕೊಪ್ಪಳಕ್ಕೆ ಪ್ರವಾಸ ಬಂದಿದ್ದರು. ಸಾಣಾಪುರದಲ್ಲಿ ಈ ಘಟನೆ ನಡೆದಿದೆ. ಅನನ್ಯಾ ರಾವ್ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದೆ.

ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಹೋದ ಮಹಿಳೆ ನೀರಿನಲ್ಲಿ ಜಿಗಿದಿದ್ದಾರೆ. ನೀರಿಗೆ ಜಿಗಿಯುವ ದೃಶ್ಯಗಳನ್ನು ಸ್ನೇಹಿತರು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...