ಕೊಪ್ಪಳ : ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ವೈದ್ಯೆ ಸಾವನ್ನಪ್ಪಿದ ಘಟನೆ ತಾಲೂಕಿನ ಸಣಾಪುರದ ಬಳಿ ನಡೆದಿದೆ. ನೀರಿನಲ್ಲಿ ನಾಪತ್ತೆಯಾದ ವೈದ್ಯೆಯನ್ನು ಹೈದರಾಬಾದ್ ಮೂಲದ ನಾಂಪಲ್ಲಿ ಪ್ರದೇಶದ ನಿವಾಸಿ ಅನನ್ಯಾ ರಾವ್ ಎಂದು ಗುರುತಿಸಲಾಗಿದೆ.
ಹೈದರಾಬಾದ್ ನ ವಿಕೆಸಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸ್ನೇಹಿತರ ಜೊತೆ ಕೊಪ್ಪಳಕ್ಕೆ ಪ್ರವಾಸ ಬಂದಿದ್ದರು. ಸಾಣಾಪುರದಲ್ಲಿ ಈ ಘಟನೆ ನಡೆದಿದೆ. ಅನನ್ಯಾ ರಾವ್ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದೆ.
ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಹೋದ ಮಹಿಳೆ ನೀರಿನಲ್ಲಿ ಜಿಗಿದಿದ್ದಾರೆ. ನೀರಿಗೆ ಜಿಗಿಯುವ ದೃಶ್ಯಗಳನ್ನು ಸ್ನೇಹಿತರು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿದ್ದಾರೆ.