alex Certify ವೈಷ್ಣೋದೇವಿಯಿಂದ ವಾಪಾಸ್ ಆಗುವಾಗ ಕಂದಕಕ್ಕೆ ಉರುಳಿದ ಬಸ್: ಚಾಲಕ ದುರ್ಮರಣ; 17 ಯಾತ್ರಿಕರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈಷ್ಣೋದೇವಿಯಿಂದ ವಾಪಾಸ್ ಆಗುವಾಗ ಕಂದಕಕ್ಕೆ ಉರುಳಿದ ಬಸ್: ಚಾಲಕ ದುರ್ಮರಣ; 17 ಯಾತ್ರಿಕರಿಗೆ ಗಾಯ

ಜಮ್ಮು-ಕಾಶ್ಮೀರದ ವೈಷ್ಣೋದೇವಿ ಮಂದಿರಕ್ಕೆ ತೆರಳಿ ವಾಪಾಸ್ ಆಗುತ್ತಿದ್ದಾಗ ಯಾತ್ರಿಕರ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 17 ಜನರು ಗಾಯಗೊಂಡಿದ್ದಾರೆ.

ಜಮ್ಮು-ಕಾಶ್ಮೀರದ ಮಾಂದಾರದಲ್ಲಿರುವ ಮಾತಾ ವೈಷ್ಣೋದೇವಿ ದರ್ಶನ ಪಡೆದು ಯಾತ್ರಿಕರು ಕತ್ರಾದಿಂದ ಬಸ್ ನಲ್ಲಿ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಚಾಲಕನ ನ್ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳಲ್ಲಿ 7 ಮಹಿಳೆಯರು ಹಾಗೂ 10 ಪುರುಷರು ಇದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಬಗ್ಗೆ ಜಮ್ಮು-ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ದುಃಖ ವ್ಯಕ್ತಪಡಿಸಿದ್ದಾರೆ. ಮೃತ ಚಾಲಕನ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти Найдите 3 различия на картинках с зайцами для людей Как пройти по крыше: