ಬೆಂಗಳೂರು : ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳು ಇಂದು ಕೋರ್ಟ್ ಗೆ ಹಾಜರಾಗಿದ್ದು, ಆರೋಪಿಗಳ ಹಾಜರಾತಿ ಪಡೆದ ಕೋರ್ಟ್ ಏ.8 ಕ್ಕೆ ವಿಚಾರಣೆ ಮುಂದೂಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 17 ಮಂದಿ ಆರೋಪಿಗಳು ಇಂದು ಕೋರ್ಟ್’ಗೆ ಹಾಜರಾಗಿದ್ದಾರೆ. ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಮುಂದೆ ಇಂದು ನಟ ದರ್ಶನ್ , ಪವಿತ್ರಾ ಗೌಡ ಸೇರಿ 17 ಮಂದಿ ಆರೋಪಿಗಳು ಇಂದು ಕೋರ್ಟ್’ಗೆ ಹಾಜರಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ವಿಚಾರಣೆ ಏ.8 ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ಫೆ.25 ರಂದು ಎಲ್ಲಾ ಆರೋಪಿಗಳು ಕೋರ್ಟ್ ಗೆ ಹಾಜರಾಗಬೇಕಾಗಿದೆ ಎಂದು ಸೂಚನೆ ನೀಡಿತ್ತು,
ಅಂತೆಯೇ ಕೊಲೆ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾಗೌಡ, ಪ್ರದೋಶ್, ವಿನಯ್, ಕೇಶವಮೂರ್ತಿ, ನಿಖಿಲ್ ನಾಯಕ್ ಸೇರಿದಂತೆ 17 ಆರೋಪಿಗಳು ಇಂದು ಸಿಸಿಹೆಚ್ ಕೋರ್ಟ್ ಗೆ ಹಾಜರಾಗಿದ್ದಾರೆ.