ಚಿಕ್ಕಬಳ್ಳಾಪುರ : ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಆದಿಯೋಗಿ ದರ್ಶನಕ್ಕೆ ಬಂದಿದ್ದ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬ್ರಿಡ್ಜ್ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ 44 ರಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಮೃತರನ್ನು ನೇಪಾಳ ಮೂಲದ ಸುನಿಲ್ ಬಿಸ್ತೂರಿ ಹಾಗೂ ಕುಜಲ್ ಭಂಡಾರಿ ಎಂದು ಗುರುತಿಸಲಾಗಿದೆ.
ಮೃತರು ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.