ಬೆಂಗಳೂರು : ಮಕ್ಕಳು ಮೊಬೈಲ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದರು.
ವಿಧಾನಸೌಧದಲ್ಲಿ ಆಯೋಜಿಸಿದ್ದ ಪುಸ್ತಕ ಮೇಳ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಎಲ್ಲರೂ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಬೇಕು. ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಬೇಕು. ಮಕ್ಕಳು ಮೊಬೈಲ್ ಮತ್ತು ಇಂಟರ್ನೆಟ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಹವ್ಯಾಸ, ಅಭ್ಯಾಸ ಬೆಳೆಸಿಕೊಳ್ಳಬೇಕು. ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು ಎಂದರು.
ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಎಲ್ಲರೂ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಬೇಕು.
ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಬೇಕು.ಮಕ್ಕಳು ಮೊಬೈಲ್ ಮತ್ತು ಇಂಟರ್ನೆಟ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಹವ್ಯಾಸ, ಅಭ್ಯಾಸ ಬೆಳೆಸಿಕೊಳ್ಳಬೇಕು.
ಇನ್ನು… pic.twitter.com/ki7irV0QIn— Siddaramaiah (@siddaramaiah) February 27, 2025