alex Certify ರಾಜ್ಯದಲ್ಲಿ ಹೆಚ್ಚಿದ ಕೋಳಿ ಜ್ವರ ಆತಂಕ: ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಹೆಚ್ಚಿದ ಕೋಳಿ ಜ್ವರ ಆತಂಕ: ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಮುಖ್ಯ ಮಾಹಿತಿ

ಶಿವಮೊಗ್ಗ: ರಾಜ್ಯದಲ್ಲಿ ಕೋಳಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ನೀಡುವ ವರದಿ ಆಧರಿಸಿ ಮೊಟ್ಟೆ ವಿತರಣೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಹಿಂದೆಯೂ ಕೋಳಿ ಜ್ವರ ಬಂದಾಗ ಸರ್ಕಾರ ಮೊಟ್ಟೆ ವಿತರಣೆ ಮುಂದುವರೆಸಿತ್ತು ಎಂದು ಉಲ್ಲೇಖಿಸಿದ ಸಚಿವರು, ಆರೋಗ್ಯ ಇಲಾಖೆ ವರದಿ ಆಧರಿಸಿ ಶಾಲೆಗಳಲ್ಲಿ ಮೊಟ್ಟೆ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ತಾಂತ್ರಿಕ ಸಮಸ್ಯೆಗಳಿದ್ದು, ಕನ್ನಡ ಒಳಿತಿಗೆ ಅಗತ್ಯವಿರುವ ಕ್ರಮವನ್ನು ಸರ್ಕಾರ ಕೈಗೊಳ್ಳುತ್ತದೆ ಎಂದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...