ಶಿವಮೊಗ್ಗ : ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ ಕಂಬ ಸ್ಥಳಾಂತರ ಕಾಮಗಾರಿ ಇರುವುದರಿಂದ ಎಂಆರ್ಎಸ್ ವಿದ್ಯುತ್ ವಿತರಣಾ ಕೇಂದ್ರದ ಪುರಲೆ ಫೀಡರ್-3 11 ಕೆವಿ ಮಾರ್ಗ ಮುಕ್ತತೆ ನೀಡಲು ಮಾ.5 ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗು ವಿದ್ಯುತ್ ಕೆಳಕಂಡ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ.
ನಗರದ ಗುರುಪುರ, ಪುರಲೆ, ಸುಬ್ಬಯ್ಯ ಆಸ್ಪತ್ರೆ, ಮಂಜುನಾಥ ಬಡಾವಣೆ, ವೆಂಕಟೇಶ ನಗರ, ಹಸೂಡಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಾವಾಗಲಿದ್ದು, ಈ ಪ್ರದೇಶದ ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ನಗರ ಉಪವಿಭಾಗ-1 ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.