ಬೆಂಗಳೂರು : ಸಚಿವ ಚೆಲುವರಾಯಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಭೂಕಬಳಿಕೆ ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಸಚಿವ ಚೆಲುವರಾಯಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 2 ಕೇಸ್ ದಾಖಲಾಗಿತ್ತು, ಪ್ರಕರಣ ರದ್ದುಕೋರಿ ಹೈಕೋರ್ಟ್ ಗೆ ಅವರು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಕೋರ್ಟ್ 2 ಕೇಸ್ ರದ್ದುಗೊಳಿಸಿದೆ.
ಬೆಂಗಳೂರಿನ ದಾಸನಪುರ ಹೋಬಳಿ ಮಾಕಳಿಯ 3 ಎಕರೆ 13 ಗುಂಟೆ ಜಮೀನು ಕಬಳಿಕೆ ಸಂಬಂಧ 2 ಕೇಸ್ ದಾಖಲಾಗಿತ್ತು, ಈ ಪ್ರಕರಣ ರದ್ದುಮಾಡುವಂತೆ ಹೈಕೋರ್ಟ್ ಗೆ ಅವರು ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಕೋರ್ಟ್ 2 ಕೇಸ್ ರದ್ದುಗೊಳಿಸಿದೆ.