alex Certify ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಆಹಾರ ಭದ್ರತಾ ಕಾಯ್ದೆಯಡಿ ಉಚಿತ ರೇಷನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಆಹಾರ ಭದ್ರತಾ ಕಾಯ್ದೆಯಡಿ ಉಚಿತ ರೇಷನ್

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಮತ್ತು ಓಎಂಎಸ್‌ಎಸ್(ಡಿ) ಯೋಜನೆಯಡಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಮಾರ್ಚ್-2025 ಮಾಹೆಗೆ ಪಡಿತರ ವಿತರಣೆ ಮಾಡಲಾಗುತ್ತಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಅಂತ್ಯೋದಯ ಪಡಿತರ ಚೀಟಿಗಳಿಗೆ ಫೆಬ್ರವರಿ ಮತ್ತು ಮಾರ್ಚ್-2025 ರ ಮಾಹೆ ಸೇರಿ 1 ರಿಂದ 3 ಸದಸ್ಯರಿರುವ ಕುಟುಂಬಕ್ಕೆ 35 ಕೆಜಿ ಅಕ್ಕಿ, 4 ಸದಸ್ಯರಿರುವ ಕುಟುಂಬಕ್ಕೆ 45 ಕೆಜಿ, 5 ಸದಸ್ಯರಿರುವ ಕುಟುಂಬಕ್ಕೆ 55 ಕೆಜಿ, 6 ಸದಸ್ಯರಿರುವ ಕುಟುಂಬಕ್ಕೆ 65 ಕೆಜಿ, 7 ಸದಸ್ಯರಿರುವ ಕುಟುಂಬಕ್ಕೆ 75 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ.

ಬಿಪಿಎಲ್ ಪಡಿತರ ಚೀಟಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಮತ್ತು ಓಎಂಎಸ್‌ಎಸ್(ಡಿ) ಯೋಜನೆಯಡಿ ಫೆಬ್ರವರಿ ಮತ್ತು ಮಾರ್ಚ್-2025 ರ ಮಾಹೆ ಸೇರಿ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ.

ಅಂತರರಾಜ್ಯ/ಅಂತರ್ ಜಿಲ್ಲೆ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಒಂದು ವೇಳೆ ನ್ಯಾಯಬೆಲೆ ಅಂಗಡಿಯವರು ಕಡಿಮೆ ಪ್ರಮಾಣ ವಿತರಿಸಿದಲ್ಲಿ ಉಚಿತ ದೂರವಾಣಿ ಸಂಖ್ಯೆ: 1967 ಅಥವಾ ತಹಶೀಲ್ದಾರ್ ಕಚೇರಿ ಮತ್ತು ಉಪನಿರ್ದೇಶಕರ ಕಚೇರಿ ಆಹಾರ ಇಲಾಖೆ ಇವರಿಗೆ ದೂರು ಸಲ್ಲಿಸಬಹುದು ಎಂದು ಬಳ್ಳಾರಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...