alex Certify ಕುತ್ತಿಗೆ ಕತ್ತರಿಸಿದ ಸ್ಥಿತಿಯಲ್ಲಿ ದಂತ ವೈದ್ಯೆ ಪತ್ತೆ…!; ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರು….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುತ್ತಿಗೆ ಕತ್ತರಿಸಿದ ಸ್ಥಿತಿಯಲ್ಲಿ ದಂತ ವೈದ್ಯೆ ಪತ್ತೆ…!; ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರು….!

ತಿರುವನಂತಪುರದಲ್ಲಿ ಕುತ್ತಿಗೆ ಕತ್ತರಿಸಿದ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದ್ದ ದಂತ ವೈದ್ಯೆ ಸಾವನ್ನಪ್ಪಿದ್ದಾರೆ. ನೆಯ್ಯಾಟಿನ್‌ಕರ ಅಮರವಿಳ ಅಲತರ ಮನೆಯ ಆದರ್ಶ್ ಪತ್ನಿ ಸೌಮ್ಯ (31) ಮೃತಪಟ್ಟಿದ್ದಾರೆ.

ಮುಂಜಾನೆ ಈ ಘಟನೆ ಸಂಭವಿಸಿದೆ. ದಂತ ವೈದ್ಯೆಯಾಗಿದ್ದ ಸೌಮ್ಯ ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮಕ್ಕಳು ಇಲ್ಲದ ಕಾರಣ ಮಾನಸಿಕವಾಗಿ ಬಳಲುತ್ತಿದ್ದರು ಎಂದು ಸಂಬಂಧಿಕರು ಹೇಳಿದ್ದಾರೆ.

ಮುಂಜಾನೆ 2 ಗಂಟೆಗೆ ಕುತ್ತಿಗೆ ಕತ್ತರಿಸಿದ ಸ್ಥಿತಿಯಲ್ಲಿ ನೆಯ್ಯಾಟಿನ್‌ಕರ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಘಟನೆ ನಡೆದ ಸಮಯದಲ್ಲಿ ಪತಿ ಮತ್ತು ಅತ್ತೆ ಮನೆಯಲ್ಲಿದ್ದರು. ಆಸ್ಪತ್ರೆಗೆ ಸಾಗಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಆತ್ಮಹತ್ಯೆಗೆ ಯತ್ನಿಸಿ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...