alex Certify BREAKING : ಬೆಂಗಳೂರಲ್ಲಿ ‘ವಿದ್ಯುತ್ ಕಂಬ’ ಮುರಿದು ಬಿದ್ದು ಇಬ್ಬರು ಮಹಿಳೆಯರು ಸಾವು ಕೇಸ್ : ಜೆಸಿಬಿ ಚಾಲಕ ಅರೆಸ್ಟ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ‘ವಿದ್ಯುತ್ ಕಂಬ’ ಮುರಿದು ಬಿದ್ದು ಇಬ್ಬರು ಮಹಿಳೆಯರು ಸಾವು ಕೇಸ್ : ಜೆಸಿಬಿ ಚಾಲಕ ಅರೆಸ್ಟ್.!

ಬೆಂಗಳೂರು : ‘ಜೆಸಿಬಿ’ ಡಿಕ್ಕಿಯಾಗಿ ವಿದ್ಯುತ್ ಕಂಬ ಮುರಿದುಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಜೆಸಿಬಿ ಚಾಲಕನನ್ನ ಪೊಲೀಸರು ಬಂಧಿಸಿದ್ದಾರೆ.

ದುರಂತದ ಬಳಿಕ ನಾಪತ್ತೆಯಾಗಿದ್ದ ಜೆಸಿಬಿ ಚಾಲಕ ರಾಜ್ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.
‘ಜೆಸಿಬಿ’ ಡಿಕ್ಕಿಯಾಗಿ ವಿದ್ಯುತ್ ಕಂಬ ಮುರಿದುಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಸದ್ದುಗುಂಟೆ ಪಾಳ್ಯದಲ್ಲಿ ನಡೆದಿದೆ.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮತಿ (35) ಮತ್ತು ಸೋನಿ (36) ಎಂಬುವವರು ಮೃತಪಟ್ಟಿದ್ದಾರೆ.ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಸೋನಿ ಕುಮಾರಿ ಬಿಹಾರ ಮೂಲದವರಾಗಿದ್ದು ಬೆಂಗಳೂರಿನಲ್ಲಿ ನೆಲೆಸಿದ್ದರು. ಮೃತ ಸುಮತಿ ತಮಿಳುನಾಡು ಮೂಲದವರಾಗಿದ್ದು, ಪತಿ ಹಾಗೂ ಇಬ್ಬರು ಮಕ್ಕಳ ಜೊತೆ ಸುದ್ದಗುಂಟೆಪಾಳ್ಯದಲ್ಲಿ ನೆಲೆಸಿದ್ದರು. ಇಬ್ಬರು ತಮ್ಮ ಮಕ್ಕಳನ್ನು ಟ್ಯೂಷನ್ ನಿಂದ ಮನೆಗೆ ಕರೆದುಕೊಂಡು ಬರುವಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ಮಕ್ಕಳಿಗೂ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...