alex Certify SHOCKING : ರಾಜ್ಯದಲ್ಲಿ ಹೆಚ್ಚುತ್ತಿದೆ ‘ಮಕ್ಕಳ ಆತ್ಮಹತ್ಯೆ’ ಕೇಸ್ : ಒಂದೇ ದಿನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಸೂಸೈಡ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ರಾಜ್ಯದಲ್ಲಿ ಹೆಚ್ಚುತ್ತಿದೆ ‘ಮಕ್ಕಳ ಆತ್ಮಹತ್ಯೆ’ ಕೇಸ್ : ಒಂದೇ ದಿನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಸೂಸೈಡ್.!

ಬೆಂಗಳೂರು : ಒಂದೇ ದಿನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯದ 2 ಜಿಲ್ಲೆಗಳಲ್ಲಿ ನಿನ್ನೆ ನಡೆದಿದೆ.

ಮೊಬೈಲ್ ಜಾಸ್ತಿ ನೋಡಬೇಡ ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ.ಬೀದರ್ ಜಿಲ್ಲೆಯ ಕಮಲಾನಗರ ತಾಲೂಕಿನಡಿಗ್ಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಸೋನಿ (15) ಎಂದು ಗುರುತಿಸಲಾಗಿದೆ.ವಿಪರೀತವಾಗಿ ಮೊಬೈಲ್ ನೋಡುವ ಗೀಳು ಬೆಳೆಸಿಕೊಂಡಿದ್ದ ವಿದ್ಯಾರ್ಥಿನಿಗೆ ಪೋಷಕರು ಜಾಸ್ತಿ ಮೊಬೈಲ್ ನೋಡಬೇಡಾ..ಓದಿನ ಕಡೆ ಗಮನ ಕೊಡು ಎಂದು ಬುದ್ದಿವಾದ ಹೇಳಿದ್ದಾರೆ. ಅಷ್ಟಕ್ಕೇ ವಿದ್ಯಾರ್ಥಿನಿ ಆತ್ಮಹತ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

8 ನೇ ತರಗತಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ಕೊಪ್ಪಳದಲ್ಲಿ ಓರ್ವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಪ್ಪಳದ ನಿರೀಕ್ಷಾ ಕಾರೇಕಲ್ ಎಂಬ ವಿದ್ಯಾರ್ಥಿನಿ ಸೂಸೈಡ್ ಮಾಡಿಕೊಂಡಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...