ನವದೆಹಲಿ : ‘ಆಪರೇಷನ್ ಬ್ರಹ್ಮ’ ಹೆಸರಿನಲ್ಲಿ ಮ್ಯಾನ್ಮಾರ್ ಗೆ ಭಾರತ ನೆರವು ನೀಡಲಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಮ್ಯಾನ್ಮಾರ್ ನ ಹಿರಿಯ ಜನರಲ್ ಘನತೆವೆತ್ತ ಮಿನ್ ಆಂಗ್ ಹ್ಲೈಂಗ್ ಅವರೊಂದಿಗೆ ಮಾತನಾಡಿದ್ದೇನೆ. ವಿನಾಶಕಾರಿ ಭೂಕಂಪದಲ್ಲಿ ಜೀವಹಾನಿಗೆ ನಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದೇವೆ. ಆಪ್ತ ಸ್ನೇಹಿತ ಮತ್ತು ನೆರೆಯ ರಾಷ್ಟ್ರವಾಗಿ, ಈ ಕಷ್ಟದ ಸಮಯದಲ್ಲಿ ಭಾರತವು ಮ್ಯಾನ್ಮಾರ್ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ. #OperationBrahma ಭಾಗವಾಗಿ ವಿಪತ್ತು ಪರಿಹಾರ ಸಾಮಗ್ರಿಗಳು, ಮಾನವೀಯ ನೆರವು, ಶೋಧ ಮತ್ತು ಪಾರುಗಾಣಿಕಾ ತಂಡಗಳನ್ನು ಪೀಡಿತ ಪ್ರದೇಶಗಳಿಗೆ ತ್ವರಿತವಾಗಿ ರವಾನಿಸಲಾಗುತ್ತಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
80 ಸದಸ್ಯರ ಎನ್ಡಿಆರ್ಎಫ್ ಶೋಧ ಮತ್ತು ಪಾರುಗಾಣಿಕಾ ತಂಡ ಮ್ಯಾನ್ಮಾರ್ಗೆ ತೆರಳಿದೆ ಎಂದು ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಶನಿವಾರ ಮಾಹಿತಿ ನೀಡಿದ್ದಾರೆ. ಭೂಕಂಪ ಪೀಡಿತ ದೇಶಕ್ಕೆ ಭಾರತವು 1500 ಟನ್ ಪರಿಹಾರ ಸಾಮಗ್ರಿಗಳನ್ನು ಹಸ್ತಾಂತರಿಸಿದೆ.
Spoke with Senior General H.E. Min Aung Hlaing of Myanmar. Conveyed our deep condolences at the loss of lives in the devastating earthquake. As a close friend and neighbour, India stands in solidarity with the people of Myanmar in this difficult hour. Disaster relief material,…
— Narendra Modi (@narendramodi) March 29, 2025