
ಹುಬ್ಬಳ್ಳಿ: ಬಿಜೆಪಿಯಿಂದ ಉಚ್ಛಾಟನೆಗೊಂಡ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಟೀವ್ ಆಗಿದ್ದು, ಇಂದು ಕೊಪ್ಪಳ ಪ್ರವಾಸ ಕೈಗೊಂಡಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಮುಖಂಡರೊಬ್ಬರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಹುಬ್ಬಳ್ಳಿಇಯ ಖಾಸಗಿ ಹೋಟೆಲ್ ನಲ್ಲಿ ಶಾಸಕ ಯತ್ನಾಳ್, ಧಾರವಾಡ ಗ್ರಾಮೀಣ ಘಟಕದ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಕೆಲ ಕಾಲ ಇಬ್ಬರು ನಾಯಕರು ಸಮಾಲೋಚನೆ ನಡೆಸಿದ್ದಾರೆ.
ಯತ್ನಾಳ್ ಕಾಂಗ್ರೆಸ್ ನಾಯಕನನ್ನು ಭೇಟಿಯಾಗಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಇನ್ನೊಂದೆಡೆ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆಗೊಂಡಿರುವ ಶಾಸಕ ಯತ್ನಾಳ್ ಅವರ ಮುಂದಿನ ನಡೆ ಏನಿರಬಹುದು? ಎಂಬ ಕುತೂಹಲ ಕೂಡ ಮೂಡಿದೆ.