alex Certify BREAKING NEWS: ಬೆಂಗಳೂರಿನಲ್ಲಿ ಒಂಟಿಯಾಗಿ ನೆಲೆಸಿದ್ದ ವೃದ್ಧೆ ನಿಗೂಢ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ ಒಂಟಿಯಾಗಿ ನೆಲೆಸಿದ್ದ ವೃದ್ಧೆ ನಿಗೂಢ ಸಾವು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂಟಿಯಾಗಿ ನೆಲೆಸಿದ್ದ ವೃದ್ಧೆಯೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಆರ್ ಪಿಸಿ ಲೇಔಟ್ ನಿವಾಸದಲ್ಲಿ ನಡೆದಿದೆ.

ಸಿದ್ದಮ್ಮ ಮೃತ ವೃದ್ಧೆ. ನಿನ್ನೆ ಮಧ್ಯಾಹ್ನ ಊಟದ ಬಳಿಕ ಸಿದ್ದಮ್ಮ ಮನೆಯಿಂದ ಹೊರಬಂದಿಲ್ಲ. ಇಂದು ಬೆಳಾಗಾಗುವಷ್ಟರಲ್ಲಿ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವೃದ್ಧೆಯ ಕಿವಿಯಲ್ಲಿರುವ ಓಲೆ ನಾಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ವೃದ್ಧೆಯ ಸಾವು ಕೊಲೆಯೋ ಅಥವಾ ಸಹಜ ಸಾವೋ ಎಂಬ ಅನುಮಾನ ವ್ಯಕ್ತವಾಗಿದೆ.

ವಿಜಯನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶಿಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...