BREAKING: ಕೆಎಎಸ್ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಅಭ್ಯರ್ಥಿಗಳ ಆಕ್ರೋಶ

ಕೋಲಾರ: ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ವಿಜಯಪುರದ ಬಳಿಕ ಕೋಲಾರದ ಪರೀಕ್ಷಾ ಕೇಂದ್ರದಲ್ಲಿಯೂ ಎಡವಟ್ಟು ಮಾಡಿಕೊಳ್ಳಲಾಗಿದೆ.

ಕೆಎಎಸ್ ಪರೀಕ್ಷೆ ವೇಳೆ ಕರ್ನಾಟಕ ಲೋಕಸೇವಾ ಆಯೋಗದಿಂದ ಮತ್ತೆ ಎಡವಟ್ಟು ನಡೆದಿದೆ. ಪ್ರವೇಶ ಪತ್ರದ ಸಂಖ್ಯೆ, ಒಎಂಆರ್ ಶೀಟ್ ಸಂಖ್ಯೆ ಹೊಂದಾಣಿಕೆಯಾಗದ ಆರೋಪ ಕೇಳಿ ಬಂದಿದೆ. .ಪರೀಕ್ಷಾ ಕೇಂದ್ರದಿಂದ ಹೊರ ಬಂದು ಪರೀಕ್ಷಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವೇಶ ಪತ್ರ, ಒಎಂಆರ್ ಶೀಟ್ ನಲ್ಲಿ ಬೇರೆ ರಿಜಿಸ್ಟರ್ ನಂಬರ್ ಇದೆ. ಬೇರೆ ಬೇರೆ ರಿಜಿಸ್ಟರ್ ಸಂಖ್ಯೆಯಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಇದನ್ನು ಪ್ರಶ್ನಿಸಿದಕ್ಕೆ ಅಧಿಕಾರಿಗಳು ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಪರೀಕ್ಷೆ ಬರೆಯಿರಿ, ಇಲ್ಲವಾದರೆ ಬಿಡಿ ಎಂದು ಧಮಕಿ ಹಾಕಿದ್ದಾರೆ ಎಂದು ಪರೀಕ್ಷಾ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿಯ ವಿರುದ್ಧ ಪರೀಕ್ಷಾರ್ಥಿಗಳು ಆರೋಪಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read