BREAKING : ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಕೇಸ್ : ಇಬ್ಬರು ಆರೋಪಿಗಳು ಅರೆಸ್ಟ್.!

ವಿಜಯಪುರ : ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹಲ್ಲೆ ನಡೆಸಿದ್ದವರ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇಟ್ಟಿಗೆ ಭಟ್ಟಿ ಕಾರ್ಮಿಕ ಖೇಮು ರಾಥೋಡ್ ಸೇರಿ ಮೂವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಇಟ್ಟಂಗಿ ಭಟ್ಟಿ ಮಾಲೀಕನೊಬ್ಬ ಮೂವರು ಕಾರ್ಮಿಕರನ್ನು ಹಿಡಿದು ಹಿಗ್ಗಾಮುಗ್ಗಾ ಪೈಪ್ ನಿಂದ ಥಳಿಸಿರುವ ಅಮಾನುಷ ಘಟನೆ ವಿಜಯಪುರದಲ್ಲಿ ನಡೆದಿದೆ.ಇಟ್ಟಂಗಿ ಭಟ್ಟಿ ಮಾಲೀಕ ಖೇಮು ರಾಠೋಡ್ ಎಂಬಾತ ಮೂವರು ಕಾರ್ಮಿಕರಿಗೆ ಮನಸೋ ಇಚ್ಛೆ ಹೊಡೆದಿದ್ದಾರೆ. ಮೂವರು ಕಾರ್ಮಿಕರು ಮುಂಗಡವಾಗಿ ಹಣ ಪಡೆದು ಬಳಿಕ ಕೆಲಸಕ್ಕೆ ಬಾರದೇ ಸತಾಯಿಸುತ್ತಿದ್ದರಂತೆ. ಕೆಲಸಕ್ಕೆ ಬಾರದೇ ವಿಳಂಬ ಮಾಡುತ್ತಿರುವುದಕ್ಕೆ ಕೋಪಗೊಂದ ಮಾಲೀಕ ಪೈಪ್ ಗಳಿಂದ ನಮಬಂದಂತೆ ಥಳಿಸಿದ್ದಾರೆ.ವಿಜಯಪುರದ ಗಂಧಿ ಸ್ಟಾರ್ ಚೌಕ್ ಬಳಿ ಈ ಘಟನೆ ನಡೆದಿದೆ. ಸದಾಶಿವ ಮಾದರ, ಸದಾಶಿವ ಬಬಲಾದಿ ಹಾಗೂ ಉಮೇಶ್ ಎಂಬುವವರನ್ನು ಥಳಿಸಲಾಗಿದ್ದು, ಮಾಲಿಕನ ಏಟಿಗೆ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read