BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳ: ನೊಂದ ರೈತ ಆತ್ಮಹತ್ಯೆಗೆ ಶರಣು

ವಿಜಯಪುರ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯ ಸಲಾದಹಳ್ಳಿಯಲ್ಲಿ ನಡೆದಿದೆ.

ಬಸನಗೌಡ ಬಿರಾದಾರ್ ಆತ್ಮಹತ್ಯೆಗೆ ಶರಣಾಗಿರುವ ರೈತ. ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸನಗೌಡ ಬಿರಾದಾರ್ ಹಲವು ಫೈನಾನ್ದ್ಸ್ ಕಂಪನಿಯಲ್ಲಿ ಸಾಲ ಮಾಡಿಕೊಂಡಿದ್ದರು.

L&Tಯಿಂದ 1.10 ಲಕ್ಷ, ನವಚೇತನ ಫೈನಾನ್ಸ್ ನಿಂದ 1 ಲಕ್ಷ, ESF ಫೈನಾನ್ಸ್ ನಿಂದ 75 ಸಾವಿರ ಸಾಲ, ಚೈತನ್ಯ ಫೈನಾನ್ಸ್ ನಲ್ಲಿ 1 ಲಕ್ಷ , RBL ಫೈನಾನ್ಸ್ 1 ಲಕ್ಷ, ಸುಗಮಾ ಫೈನಾನ್ಸ್ 50 ಸಾವಿರ, ಧರ್ಮಸ್ಥಳ ಸಂಘದಲ್ಲಿ 1 ಲಕ್ಷ ಸಾಲ ಪಡೆದಿದ್ದರು. ಸಾಲ ಮರುಪಾವತಿ ಮಾಡಲಾಗದೇ ಫೈನಾನ್ಸ್ ನವರ ಕಿರುಕುಳಕ್ಕೆ ನೊಂದು ರೈತ ನೇಣಿಗೆ ಶರಣಾಗಿದ್ದಾರೆ.

ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read